ಮಂಗಳೂರು: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!‌
ಮಹಿಳೆಗೆ ಅಡ್ಡಗಟ್ಟಿ ಚೂರಿ ತೋರಿಸಿ ಕರಿಮಣಿ ಕಸಿದಿದ್ದ ಬಶೀರ್

ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಉಳ್ಳಾಲ ನಿವಾಸಿ ಆರೋಪಿ ಬಶೀರ್ ಎಂದು ಗುರುತಿಸಲಾಗಿದೆ.

2000ರಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರನ್ನು ಬಂಧನ ಮಾಡಲಾಗಿತ್ತು. ಆದರೆ ಆರೋಪಿ ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಮೇಲಾಧಿಕಾರಿಗಳ ಸೂಕ್ತ ಮಾರ್ಗದರ್ಶನದಲ್ಲಿ ದಸ್ತಗಿರಿ ಮಾಡಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!