ವ್ಯಕ್ತಿ ನಾಪತ್ತೆ - ದೂರು ದಾಖಲು
ಮುಲ್ಕಿ: ಕೆಲಸಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಮನಗೆ ಬಾರದೇ ನಾಪತ್ತೆಯಾಗಿರುವ ಘಟನೆ ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮದಲ್ಲಿ ನಡೆದಿದೆ.
ಹಳೆಯಂಗಡಿ ಗ್ರಾಮದ ಕದ್ರಾತೋಟದ ನಿವಾಸಿ ದೇವದಾಸ್(52) ನಾಪತ್ತೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಇವರು ಮನೆಯಿಂದ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ದೇವದಾಸ್ ಅವರ ಪತ್ನಿ ಅಮಿತಾ ಅವರು ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 25- 7-2023ರಿಂದ ನಾಪತ್ತೆಯಾಗಿದ್ದು, ಈಗಾಗಲೇ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಯಾರಿಗಾದರೂ ಮಾಹಿತಿ ದೊರೆತರೆ 9663558391, 9113004298 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿರಿ. ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.
Comments
0 comment