ಸುಳ್ಯ: ಬಾಲಕ ನೇಣು ಬಿಗಿದು ಆತ್ಮಹತ್ಯೆ.!
ಅಜ್ಜಿಗೆ ಕರೆ ಮಾಡಿ ತಿಳಿಸಿ ಆತ್ಮಹತ್ಯೆ ಮಾಡಿಕೊಂಡ ಬಾಲಕ

ಸುಳ್ಯ: ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ.

ಬಾಲಕನ ತಾಯಿ ಶಮೀರಾ ಮಗಳ ಚಿಕಿತ್ಸೆಗಾಗಿ ಕ್ಯಾಲಿಕೆಟ್ ತೆರಳಿದ್ದರು, ಈ ಸಂದರ್ಭ ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ಇಂದು ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಇನ್ನು ಬಾಲಕ ಎಸ್.ಎಸ್.ಎಲ್ ಪೂರ್ಣಗೊಳಿಸಿ ನಿಂತಿಕಲ್ಲಿನ ಸಂಸ್ಥೆಯಲ್ಲಿ ಐಟಿಐಗೆ ದಾಖಲಾತಿ ಮಾಡಲಾಗಿತ್ತು. ಇಂದು ತರಗತಿ ಆರಂಭವಾಗಿ ಆತನು ತರಗತಿಗೆ ತೆರಳಬೇಕಾಗಿತ್ತು. ತರಗತಿಗೆ ತೆರಳಲು ತನಗೆ ಮನಸ್ಸಿಲ್ಲ ಎಂದು ಮನೆಯಲ್ಲಿ ಹೇಳಿಕೊಂಡಿದ್ದ.ಇದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!