ಕಿನ್ನಿಗೋಳಿ: ಭೀಕರ ರಸ್ತೆ ಅಪಘಾತ - ಸ್ಪಾಟ್ ಡೆತ್.!
ಕಾರು, ಟಿಪ್ಪರ್ ನಡುವೆ ಅಪಘಾತ - ಓರ್ವ ಸಾವು - ಇನ್ನೋರ್ವ ಗಂಭೀರ

ಕಿನ್ನಿಗೋಳಿ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.

ಮೃತ ಪಟ್ಟವರನ್ನು ಬೆಳುವಾಯಿ ನಿವಾಸಿ ರಾಮಣ್ಣ (49) ಎಂದು ಗುರುತಿಸಲಾಗಿದೆ.

ಕಿನ್ನಿಗೋಳಿಯ ಮೂರು ಕಾವೇರಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಬಳಿ ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್ ಗೆ ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಟಿಪ್ಪರಿಗೂ ಹಾನಿಯಾಗಿದೆ. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡ ಬಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾದ್ಯವಾಗಿಲ್ಲ. ಮೃತ ರಾಮಣ್ಣ ಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಹಳೆಯ ಮನೆಯನ್ನು ಕೆಡವುವ ಕೆಲಸವನ್ನು ಮಾಡಿ ಸಂಜೆ ತಮ್ಮ ಮನೆ ಬೆಳುವಾಯಿ ವಾಪಸ್ಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!