ಸುರತ್ಕಲ್: ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನದಲ್ಲಿ ಸೌಜನ್ಯ ಕೊಲೆ ಆರೋಪಿಗಳ ಶಿಕ್ಷೆಗೆ ಪ್ರಾರ್ಥನೆ
ಹಿಂದೂ ಯುವ ಸೇನೆ ಓಂಕಾರ ಘಟಕ ಹಾಗೂ ಓಂಕಾರ ಮಹಿಳಾ ಘಟಕ ಸುರತ್ಕಲ್ ವತಿಯಿಂದ ಸೌಜನ್ಯಗೆ ನ್ಯಾಯ ಸಿಗುವಂತೆ ಪ್ರಾರ್ಥನೆ

ಸುರತ್ಕಲ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸದ್ಯ ರಾಜ್ಯಾದ್ಯಂತ ತೀವ್ರ ಚರ್ಚೆ ಹಾಗೂ ಪ್ರತಿಭಟನೆ ಪ್ರಾರಂಭವಾಗಿದೆ. ಸೌಜನ್ಯಗೆ ನ್ಯಾಯ ಸಿಗುವಂತೆ ಎಲ್ಲೇಡೆ ದೇವಸ್ಥಾನಗಳಲ್ಲಿ ಪ್ರಾರ್ಥನೆ ಪೂಜೆಗಳು ನಡೆಯುತ್ತಿದೆ. ಅದೇ ರೀತಿ  ಹಿಂದೂ ಯುವ ಸೇನೆ ಓಂಕಾರ ಘಟಕ ಹಾಗೂ ಓಂಕಾರ ಮಹಿಳಾ ಘಟಕ ಸುರತ್ಕಲ್ ವತಿಯಿಂದ ಕ್ಷೇತ್ರದ ಭಕ್ತರಿಂದ ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನ ಸುರತ್ಕಲ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ಹಿಂದೂ ಯುವ ಸೇನೆ ಓಂಕಾರ ಘಟಕ ಹಾಗೂ ಓಂಕಾರ ಮಹಿಳಾ ಘಟಕ ಸುರತ್ಕಲ್ ಸದಸ್ಯರಿಂದ ಹಾಗೂ ಕ್ಷೇತ್ರದ ಭಕ್ತರಿಂದ ಸೌಜನ್ಯಲಿಗೆ ಆದಷ್ಟು ಬೇಗನೆ ನ್ಯಾಯ ಸಿಗಲಿ ಮತ್ತು ನೈಜ ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು  ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನ ಸುರತ್ಕಲ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!