ಸುರತ್ಕಲ್‌: ಬೈಕ್ ಗೆ ಖಾಸಗಿ ಬಸ್ ಡಿಕ್ಕಿ - ಇಬ್ಬರು ಯುವಕರು ಗಂಭೀರ
ಹೊಸಬೆಟ್ಟು ಜಂಕ್ಷನ್‌ನಲ್ಲಿ ಬೈಕಿಗೆ ಗುದ್ದಿದ್ದ ಬಸ್ : ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ಸುರತ್ಕಲ್‌: ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ  ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ​ನ ಹೊಸಬೆಟ್ಟು ಸಮೀಪ ನಡೆದಿದೆ.

ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇ ಅವಘಡ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳು ಬಸ್ ಚಾಲಕನ ನಿರ್ಲಕ್ಷ್ಯವನ್ನು ಸ್ಪಷ್ಟವಾಗಿ ತೋರಿಸಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!