ಬೈಕ್ ಸ್ಕಿಡ್ ಆಗಿ ಮಣಿಪಾಲ ಕಾಲೇಜಿನ ವಿದ್ಯಾರ್ಥಿನಿ ಮೃತ್ಯು
ಬೈಕ್ ಸ್ಕಿಡ್ - ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

 ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲ ಕಾಲೇಜೊಂದರ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. 

ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು. 

ಭಾನುವಾರ ರಾತ್ರಿ ಕಾಸರಗೋಡಿನ ಬೇಕಲದಿಂದ ಮಂಗಳೂರಿಗೆ ಬುಲೆಟ್ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್‌ಗೂ ಮುನ್ನ ಪುಲಿಕುನ್ ಇಂಟರ್ ಲಾಕ್ ಪೇವ್‌ಮೆಂಟ್ ಬಳಿ ರಸ್ತೆಯಲ್ಲಾದ ಹೊಂಡ ಕಾರಣದಿಂದ ಸ್ಕಿಡ್ ಆಗಿ ಬಿದ್ದಿದ್ದಾರೆ. ಅಜಿತ್ ಕುರುಪ್ (20) ಹಾಗೂ ಶಿವಾನಿ ಜೊತೆಯಾಗಿ ಪ್ರಯಾಣಿಸುತ್ತಿದ್ದರು. ಬಿದ್ದ ರಭಸಕ್ಕೆ ಶಿವಾನಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ತೀವ್ರವಾಗಿ ಗಾಯಗೊಂಡಿದ್ದ ಶಿವಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಇವರು ಮಣಿಪಾಲ ವಿಶ್ವ ವಿದ್ಯಾಲಯದ ವಿದ್ಯಾರ್ಥಿ. ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!