ಗುರುಪುರ: ಎಸ್‌ಸಿ-ಎಸ್‌ಟಿ ಕಾಲೊನಿಯಲ್ಲಿ ಸಭಾಭವನ ನಿರ್ಮಾಣಕ್ಕೆ ಗುದ್ದಲಿಪೂಜೆ
ಸಭಾಭವನ ನಿರ್ಮಾಣ - 12 ಲಕ್ಷ ರೂ ಅನುದಾನ

ಗುರುಪುರ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಂಟಿ ಕಾಲೊನಿಯಲ್ಲಿ ನೂತನ `ಸಭಾಭವನ' ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಮಾಧ್ಯಮದೊಂದಿಗೆ ಶಾಸಕರು ಮಾತನಾಡಿ, ಇದು 12 ಲಕ್ಷ ರೂ ಅನುದಾನದ ಕಾಮಗಾರಿಯಾಗಿದ್ದು, ಸಭಾಭವನ ರಚನೆಗೆ ಅಗತ್ಯವಿರುವ ಉಳಿಕೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಾಲೊನಿ ಮಂದಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಅಧಿಕಾರಿಗಳು, ಸ್ಥಳೀಯ ಭಾಗದ ಪಕ್ಷದ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!