ಕಣ್ಣೂರು ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ- 25 ಲಕ್ಷದ ಮರಳುಸೊತ್ತು ವಶಕ್ಕೆ
ಮಂಗಳೂರು: ಮಂಗಳೂರು ನಗರದ ಕಣ್ಣೂರು ಬಳಿ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸೋಮವಾರ ಮಧ್ಯರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಿಸಿಬಿ ದಾಳಿ ವೇಳೆ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಮರಳು ಸಾಗಾಟಕ್ಕೆ ಬಳಸಿದ್ದ 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಸಿಸಿಬಿ ಘಟಕದ ಎಎಸ್ಸೈ ಮೋಹನ್ ಮತ್ತು ಸಿಬ್ಬಂದಿ ವರ್ಗವು ದಾಳಿಯಲ್ಲಿ ಪಾಲ್ಗೊಂಡಿತ್ತು.
Comments
0 comment