ಉಡುಪಿ: 22 ವರ್ಷದ ಯುವಕ ಆತ್ಮಹತ್ಯೆಗೆ ಶರಣು..!
ಸೀರೆಯಿಂದ ನೇಣು ಬಿಗಿದು ಜೀವಾಂತ್ಯ

ಉಡುಪಿ: ಯುವಕನೊಬ್ಬ ಮನೆಯ ಹೊರ ಜಗುಲಿಯ ಮೇಲೆ ಇರುವ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ನಗರದ ಕುಕ್ಕಿ ಕಟ್ಟೆಯ ಪರಾಗ್ ವೈನ್ಸ್ ಹಿಂಬದಿಯ ಮನೆಯೊಂದರಲ್ಲಿ ನಡೆದಿದೆ.

ಮೃತ ಯುವಕನನ್ನು ಪ್ರಶಾಂತ್ (22) ಗುರುತಿಸಲಾಗಿದೆ. 

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ತಕ್ಷಣ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದು, ಒಳಕಾಡು ಸ್ಥಳಕ್ಕೆ ಬಂದು ನೋಡುವಾಗ ಯುವಕ ನರಳುವ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ. ತಕ್ಷಣ ಅವರು ಯುವಕನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಆತನನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!