ಸುರತ್ಕಲ್: ಭೀಕರ  ಅಪಘಾತ - ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ.!
ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ

ಸುರತ್ಕಲ್: ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಬೆಟ್ಟುವಿನ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.

ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.

ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!