ಬಂಟ್ವಾಳ:  ಲಾರಿ ಪಲ್ಟಿ - ಕಾರ್ಮಿಕರ ಕೈಕಾಲು ಛಿದ್ರ ಛಿದ್ರ.!
ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿಯಾಗಿ ಗಂಭೀರ ಗಾಯ

ಬಂಟ್ವಾಳ: ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಬಿದ್ದು ಕಾರ್ಮಿಕರು ಗಂಭೀರ ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ನಡೆದಿದೆ.

ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ಬಿದ್ದು ಲಾರಿಯಲ್ಲಿದ್ದ ಐವರು ಕಾರ್ಮಿಕರ ಕೈಕಾಲು ಛಿದ್ರಗೊಂಡಿದ್ದು, ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮೃತಪಟ್ಟ ವ್ಯಕ್ತಿಯನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಮೂವರಿಗೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ನಾಲ್ವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!