ಬನ್ಸ್ ರಾಘು ಹತ್ಯೆಗೈದ ಶಫಿವುಲ್ಲಾ , ಇಮ್ರಾನ್ ಅರೆಸ್ಟ್ .!
ರಾಘವೇಂದ್ರ ಶೇರುಗಾರ್ ಹತ್ಯೆ ಪ್ರಕರಣ : ಇಬ್ಬರು ಕೊಲೆಗಾರರು ಅರೆಸ್ಟ್

ಕುಂದಾಪುರ: ಕುಂದಾಪುರದ ರಾಘವೇಂದ್ರ ಶೇರುಗಾರ್ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಕೊಲೆಗಾರರನ್ನು ಬಂಧಿಸಿದ್ದಾರೆ.

 ಶಫಿವುಲ್ಲಾ (40) ಮತ್ತು ಇಮ್ರಾನ್ (43) ಬಂಧಿತ ಆರೋಪಿಗಳು.

ಇಬ್ಬರು ಆರೋಪಿಗಳು ಶಿವಮೊಗ್ಗ ಮೂಲದವರಾಗಿದ್ದು, ಅಕ್ಟೋಬರ್ 1ರಂದು ಕುಂದಾಪುರದಲ್ಲಿ ರಾಘು ಅವರಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದರು. ಗಂಭೀರ ಗಾಯಗೊಂಡ ರಾಘವೇಂದ್ರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು.

ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಇಂದು ಕುಂದಾಪುರದ ಹೆಚ್ಚುವರಿ ಸಿವಿಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!