ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ್‌ ನಿಧನ
ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ್‌ ನಿಧನ

ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು.

ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಗಮನ ಸೆಳೆದಿದ್ದರು. ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು, ಸೋಮವಾರ ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. 

ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರ ವೇಣುಗೋಪಾಲ ಅವಿವಾಹಿತರಾಗಿದ್ದಾರೆ. ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!