ನೇಣಿಗೆ ಕೊರಳೊಡ್ಡಿದ ಯುವತಿ
ಕಾರ್ಕಳ: ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ(23) ಎಂದು ಗುರುತಿಸಲಾಗಿದೆ.
ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Comments
0 comment