ತೋಟದ ಕೆರೆಗೆ ಬಿದ್ದ ಮಹಿಳೆ ಸಾವು
ಪುತ್ತೂರು : ಎಡಮಂಗಲ ಗ್ರಾಮದ ಕೇರ್ಪಡ ಸುಂದರ ಗೌಡರ ತೋಟದಲ್ಲಿರುವ ಕೆರೆಗೆ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮೃತರನ್ನು ಕೇರ್ಪಡ ದಿ. ಹುಕ್ರ ಎಂಬವರ ಪತ್ನಿ ಗಿರಿಜಾ (50 ವ.) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಮನೆಯವರು ತೋಟಕ್ಕೆ ಅಡಿಕೆ ಹೆಕ್ಕಲೆಂದು ಹೋದಾಗ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಆ ಬಳಿಕ ಊರವರು ಸ್ಥಳಕ್ಕೆ ಆಗಮಿಸಿದ್ದು,ಮೃತರ ಗುರುತು ಪತ್ತೆ ಮಾಡಲಾಯಿತು. ಗಿರಿಜಾ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಪುತ್ರ ಲೋಕೇಶ್ ಎಂಬವರನ್ನು ಅಗಲಿದ್ದಾರೆ.
Comments
0 comment