ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ
ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚ ಚೆಕ್ಕುತ್ತಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು,ಕೃತ್ಯಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.

ಮೃತರು ತಾಯಿ,  ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!