ಮಂಗಳೂರು: ಅಕ್ರಮ ಮರಳುಗಾರಿಕೆ - ಪೊಲೀಸ್ ರೈಡ್ - ದೋಣಿಗಳ ವಶ.!!
ಅಕ್ರಮ ಮರಳುಗಾರಿಕೆ - ನಾಲ್ಕು ದೋಣಿಗಳು ವಶಕ್ಕೆ.!

ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ ನಡೆಸಿದ ಘಟನೆ ಇಂದು ಬೆಳಗ್ಗೆ ಹರೇಕಳ ಪಾವೂರು ಬಳಿ ನಡೆದಿದೆ. 

ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಜಾಗಕ್ಕೆ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಸಮೀಪದ ಮನೆಗಳಿಗೆ ನೇತ್ರಾವತಿ ನದಿಯಿಂದ ದೋಣಿಗಳ ಮೂಲಕ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಮರಳು ಸಹಿತ ನಾಲ್ಕು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!