ಸುರತ್ಕಲ್: ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ
ಸುರತ್ಕಲ್: ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಅಧ್ಯಕ್ಷತೆಯಲ್ಲಿ ವಿದ್ಯಾದಾಯಿನೀ ವಜ್ರ ಮಹೋತ್ಸವ ಸಭಾಂಗಣದಲ್ಲಿ ಡಿಸೆಂಬರ್ 5 ಮತ್ತು 6 ರಂದು ನಡೆಯಿತು. 

ಮೊದಲನೆಯ ದಿನ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರು ಕ್ರೈಂ ಮತ್ತು ಟ್ರಾಫಿಕ್ ವಿಭಾಗದ ಪೊಲೀಸ್ ಆಯುಕ್ತ ಬಿಪಿ ದಿನೇಶ್ ಕುಮಾರ್ ಮಾತನಾಡಿ ಇಂದಿನ ಯುವ ಜನಾಂಗ ಸೈಬರ್ ಅಪರಾಧ ಪ್ರಕರಣಗಳಿಗೆ ಹೆಚ್ಚು ಬಲಿಯಾಗುತ್ತಿದ್ದು ಹೆತ್ತವರು ಮಕ್ಕಳ ಮೊಬೈಲ್ ಬಳಕೆಯ ಮೇಲೆ ನಿಗ ವಹಿಸಬೇಕಾಗಿರುವುದು ಇಂದಿನ ಕಾಲಘಟ್ಟದಲ್ಲಿ ಅತಿ ಅವಶ್ಯಕ ಎಂದು ಹೇಳಿದರು.

ಗೌರವ ಅತಿಥಿ ಶ್ರೀಪರ್ಣ, ಶ್ರೀಹರಿ, ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ, ಶ್ರೀರಂಗ ಹೆಚ್, ಶಾಲಾ ಸಂಚಾಲಕ ವಿಶ್ವರಾಜ್ ಇಡ್ಯಾ, ಪ್ರಾಂಶುಪಾಲ ಡಾ. ಶಶಿಕುಮಾರ್ ಕೆ ಸಿ, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿದ್ದ ಗಣ್ಯರು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಶಾಲಾ ಸಂಚಾಲಕ ವಿಶ್ವರಾಜ್ ಇಡ್ಯಾ ಸ್ವಾಗತಿಸಿ, ಶಿಕ್ಷಕಿ ವಿದ್ಯಾ ವಿ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ಸಿ ವಂದಿಸಿದರು.

ಎರಡನೆಯ ದಿನ ಕಾರ್ಯಕ್ರಮದಲ್ಲಿ ಸಿವಿಲ್ ಕಾಂಟ್ರಾಕ್ಟರ್ ಮತ್ತು ಗುತ್ತಿಗೆದಾರ ಪ್ರಸಿದ್ಧ ಪಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಶಿಕ್ಷಕಿ ಆಶಾ ಬಿ ಅಮೀನ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಎರಡು ದಿನಗಳ ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಜರುಗಿದವು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!