ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಕ
ಉಡುಪಿ : ಹೃದಯ ಸಂಬAಧಿ ಖಾಯಿಲೆಯಿಂದ ಬಳಲುತ್ತಿದ್ದ ಪ್ರಥಮ ಪಿಯು ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರೋ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು 17 ವರ್ಷದ ಅಫ್ಕಾರ್ ಎಂದು ಗುರುತಿಸಲಾಗಿದೆ.
ಮೃತ ಅಫ್ಕಾರ್ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ. ಕಳೆದ ಡಿಸೆಂಬರ್ 6 ರಂದು ಅಫ್ಕಾರ್ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ. ಊರಿಗೆ ಹಿಂದಿರುಗಿದ ಸಂದರ್ಭದಲ್ಲೇ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಗುರುವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಫ್ಕಾರ್ ಮೃತಪಟ್ಟಿದ್ದಾನೆ. ಈತ ಹುಟ್ಟಿನಿಂದ ಹೃದಯ ಸಂಬAಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
Comments
0 comment