ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಮೃತ್ಯು
ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಯುವಕ.
ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ. ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದ ವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Comments
0 comment