ಸಿಎಂ ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಿಂಜಾವೇ ಆಕ್ರೋಶ
ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.!
ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.!
ಕಾರ್ಕಳ : ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪೊಲೀಸ್ ದೂರು ನೀಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವ ಸಂದರ್ಭದಲ್ಲಿಯೇ ರಾಮ ಭಕ್ತರನ್ನು ಬಂಧಿಸುತ್ತಿರುವುದು ಹಿಂದೂ ವಿರೋಧಿ ನೀತಿಯನ್ನು ತೋರಿಸುತ್ತದೆ ಇಂತಹ ಧೋರಣೆಗಳಿಂದ ಹಿಂದೆ ಸರಿಯದಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಚಾರಗಳಿಗೆ ರಾಜ್ಯ ಸರ್ಕಾರ ನೇರ ಹೊಣೆ ಎಂದು ಜಾಗರಣ ವೇದಿಕೆ ತಿಳಿಸಿದೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಉಪಾದೀಕ್ಷಕರಿಗೆ ಹಿಂದು ಜಾಗರಣ ವೇದಿಕೆ ವತಿಯಿಂದ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೋಳ ಪ್ರಶಾಂತ್ ಕಾಮತ್, ಡಾ ರವೀಂದ್ರ ಶೆಟ್ಟಿ, ಪ್ರಕಾಶ್ ಕುಕ್ಕೆ ಹಳ್ಳಿ, ಸಂತೋಷ್ ಕುಕ್ಕುದ ಕಟ್ಟೆ, ರಮೇಶ್ ಕಲ್ಲೋಟ್ಟೆ, ಪ್ರಶಾಂತ್ ನಾಯಕ್, ಗುರು ಪ್ರಸಾದ್ ನಾರಾವಿ, ಸತ್ಯೇಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.
Comments
0 comment