ದಕ್ಷಿಣ ಕನ್ನಡ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ - ಸತೀಶ್ ಕುಂಪಲ  ಆಯ್ಕೆ.!
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

ಮಂಗಳೂರು: ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ. 

ಲೋಕಸಭಾ ಚುನಾವಣೆ ಸಮೀಪ ಬರುತ್ತಿದ್ದಂತೆ ಅವಧಿ ಮುಗಿದ ಜಿಲ್ಲಾವಾರು ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.  ಪ್ರಸ್ತುತ ಸುದರ್ಶನ ಮೂಡಬಿದಿರೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅಧ್ಯಕ್ಷರ ಬದಲಾವಣೆ ನಡೆದಿದೆ. ಜಿಲ್ಲೆಯ ಪದಾಧಿಕಾರಿಗಳ ಆಯ್ಕೆಯಾದ ಕೂಡಲೇ ಮಂಡಲಗಳ ಪದಾಧಿಕಾರಿಗಳ ಆಯ್ಕೆ ಶೀಘ್ರವಾಗಿ ನಡೆಯಲಿದೆ ಎಂದು ಹೇಳಲಾಗಿದೆ.

ದ.ಕ.ಸೇರಿದಂತೆ 90 ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.14ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕುಂಪಲ ಅವರು ಪ್ರಸ್ತುತ ಬಿಜೆಪಿ ದ.ಕ.ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸತೀಶ್ ಕುಂಪಲ ಅವರು ಕಳೆದ ಬಾರಿ ಮಂಗಳೂರು ಕ್ಷೇತ್ರದಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿರುದ್ದ ‌ಸ್ಪರ್ಧಿಸಿ ಪರಾಜಯಗೊಂಡಿದ್ದರು. ಈ ಹಿಂದೆ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ವಿಚಾರದಲ್ಲಿ ಅನುಭವಿಯಾಗಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!