ಭಾರತೀಯ ಜನತಾ ಪಾರ್ಟಿಯ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಪುತ್ತೂರು ಮೂಲದ ಅಕ್ಷಯ್ ರೈ ದಂಬೆಕಾನ ಆಯ್ಕೆಯಾಗಿದ್ದಾರೆ. ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್ ಮಾಕ್ಕೂರುರವರು ಅಕ್ಷಯ್ ರೈ ಅವರನ್ನು ಬಿಜೆಪಿ ರಾಜ್ಯ ಕೋ-ಕನ್ವಿನರ್ ಆಗಿ ಘೋಷಿಸಿದ್ದಾರೆ.
ಅಕ್ಷಯ್ ರೈ ದಂಬೆಕಾನ ಕಳೆದ ಹನ್ನೆರಡು ವರ್ಷಗಳ ಕಾಲ ಬಿಜೆಪಿ ಯುವಮೋರ್ಚಾದ ಮಂಡಲ ಜಿಲ್ಲೆ ಹಾಗೂ ರಾಜ್ಯದ ಹಲವಾರು ಜವಬ್ದಾರಿಯನ್ನು ನಿಭಾಯಿಸಿ, ಬೆಂಗಳೂರು ಜಿಲ್ಲೆ ಖಜಾಂಜಿಯಾಗಿ ನಂತರ ರಾಜ್ಯದ ಕಾರ್ಯಕಾರಿಣಿ ಸದಸ್ಯರಾಗಿ, ಮಾಧ್ಯಮದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ತಮಿಳುನಾಡು ರಾಜ್ಯದ ವಿಧಾನ ಸಭಾ ಚುಣಾವಣೆಯ ಸಂದರ್ಭದಲ್ಲಿ ಕನ್ಯಾಕುಮಾರಿ ಜಿಲ್ಲೆಯ ಕೊಲಚ್ಚಿಲ್ ಮತ್ತು ನಾರಗಕೋವಿ ಕ್ಷೇತ್ರಗಳ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ.
ಹಲವಾರು ಎಂ ಎಲ್ ಎ ಮತ್ತು ಎಂಎಲ್ಸಿ ಚುನಾವಣೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡ ಅಕ್ಷಯ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಜವಬ್ದಾರಿಗಳನ್ನು ನಿಭಾಯಿಸಿಕೊಂಡು ಬಂದಿರುವ ಅಕ್ಷಯ್ ರೈ ದಂಬೆಕಾನರವರಿಗೆ ಈ ಬಾರಿ ವಿಜಯೇಂದ್ರರವರ ತಂಡದಲ್ಲಿ ಉನ್ನತ ಸ್ಥಾನ ದೊರಕಿರುವುದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅಕ್ಷಯ್ ರೈ ದಂಬೆಕಾನರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ಕೋ-ಕನ್ವಿನರ್ ಆಗಿ ಇಂದಿನಿ0ದ ಕಾರ್ಯನಿರ್ವಹಿಸಲಿದ್ದಾರೆ.
Comments
0 comment