ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ಸಾವರ್ಕರ್ ಬೊರ್ಡ್ ಸಮೇತ ಧ್ವಜ ಕಟ್ಟೆ ತೆರವು ಮಾಡಲಾಗಿತ್ತು. ಇದೀಗ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಅದೇ ಸ್ಥಳದಲ್ಲಿ ಹನುಮ ಧ್ವಜ ಹಾರಿಸಿದ್ದಾರೆ. ಕಾರ್ಯಕರ್ತರ ಸಭೆಗೆಂದು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದಾಗ ಧ್ವಜ ಹಾರಿಸಿದ್ದಾರೆ.
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಹನುಮ ಧ್ವಜವನ್ನು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ಅನಧಿಕೃತವಾಗಿ ಧ್ವಜ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ತೆಂಗಿನಗುಂಡಿ ಗ್ರಾಮದಲ್ಲಿ ಕಟ್ಟಲಾಗಿದ್ದ ಧ್ವಜ ಕಟ್ಟೆ ಹಾಗೂ ಸಾವರ್ಕರ್ ಬೊರ್ಡ್ ಅನ್ನು ತೆರವು ಮಾಡಲಾಗಿತ್ತು. ಇದಕ್ಕೆ ಸ್ಥಳಿಯ ಹಿಂದೂ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು.
ಕಾರ್ಯಕರ್ತರ ಸಭೆಗೆಂದು ಅನಂತ್ ಕುಮಾರ್ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾನಿದ್ದೇನೆ ನಡಿರಿ ಎಂದು ಹೇಳಿ ಅನಂತ್ ಕುಮಾರ್ ಹೆಗಡೆ ಅವರು ತೆರವು ಮಾಡಲಾಗಿದ್ದ ಸ್ಥಳದಲ್ಲೇ ಹನುಮ ಧ್ವಜ ಹಾರಿಸಿದರು. ಅಲ್ಲದೆ, ಸಾವರ್ಕರ್ ಬೋರ್ಡ್ ಕೂಡ ಹಾಕಿದರು.
Comments
0 comment