"ಅಯೋಧ್ಯೆಯಲ್ಲಿ ಸಿಂಪಲ್​ ಸ್ಟಾರ್"​ - ಬಾಲ ರಾಮನನ್ನು ಕಣ್ತುಂಬಿಕೊಂಡ ನಟ ರಕ್ಷಿತ್​ ಶೆಟ್ಟಿ
ರಾಮನ ಕಣ್ಣೇ ಮಹಾದ್ಭುತ ಎಂದ ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಸ್ನೇಹಿತರ ಜೊತೆಗೆ ಅಯೋಧ್ಯೆಗೆ ತೆರಳಿರುವ ರಕ್ಷಿತ್, ರಾಮನ ದರ್ಶನ ಪಡೆದಿದ್ದಾರೆ. ಜೊತೆಗೆ ರಾಮಲಲ್ಲಾ ಮತ್ತು ಅಯೋಧ್ಯೆಯ ಕುರಿತಂತೆ ಮೆಚ್ಚುಗೆಯನ್ನೂ ವ್ಯಕ್ತ ಪಡಿಸಿದ್ದಾರೆ.ರಕ್ಷಿತ್ ಶೆಟ್ಟಿ ಅಯೋಧ್ಯೆಯಲ್ಲಿ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ರಿಚರ್ಡ್ ಆಂಟನಿ' ಮುಹೂರ್ತಕ್ಕೂ ಮುನ್ನ 'ಬಾಲರಾಮ'ನ ದರ್ಶನ ಮಾಡಿಕೊಂಡ ನಟ ರಕ್ಷಿತ್ ಶೆಟ್ಟಿ. ರಕ್ಷಿತ್ ಶೆಟ್ಟಿ  ಇದೀಗ ಹೊಸ ಚಿತ್ರ ರಿಚರ್ಡ್ ಆಂಟೋನಿಗಾಗಿ ತಯಾರಿ ನಡೆಸಿದ್ದಾರೆ. ಸಿನಿಮಾಗೆ ಸಂಬಂಧಿಸಿದ ಕೆಲಸಗಳಿಂದ ಬಿಡುವು ಸಿಕ್ಕಾಗಲೆಲ್ಲ ನೆಮ್ಮದಿಯನ್ನ ಅರಸಿ, ದೇವಸ್ಥಾನಕ್ಕೆ ತೆರಳುವುದು ರಕ್ಷಿತ್ ಶೆಟ್ಟಿ ರೂಢಿಸಿಕೊಂಡ ಅಭ್ಯಾಸ. ಇದಕ್ಕೆ ಇನ್ನೊಂದು ಉದಾಹರಣೆ ರಕ್ಷಿತ್ ಶೆಟ್ಟಿ ಅಯೋಧ್ಯೆಗೆ ತೆರಳಿದ್ದಾರೆ. ಬಾಲರಾಮನ ಪಾದಕ್ಕೆರಗಿ ಆಶೀರ್ವಾದವನ್ನೂ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ರಕ್ಷಿತ್ ಶೆಟ್ಟಿ ಕಂಡ ಅಭಿಮಾನಿಗಳು ಪುಳಕಿತಗೊಂಡಿದ್ದಾರೆ. 

ಸೆಲ್ಫೀ, ಫೋಟೋ ಕ್ಲಿಕಿಸಿಕೊಂಡು ಸಂಭ್ರಮಿಸಿದ್ದಾರೆ. ಸದ್ಯಕ್ಕೆ ರಕ್ಷಿತ್ ಶೆಟ್ಟಿ ಅವರ ಅಯೋಧ್ಯೆ ಪ್ರವಾಸದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ಈ ವರ್ಷದ ಆರಂಭದಲ್ಲಿ ಮನೆಯ ದೈವ ಕೋಲದಲ್ಲಿ ಭಾಗವಹಿಸಿ ರಕ್ಷಿತ್ ಶೆಟ್ಟಿ ದೈವದ ಆಶೀರ್ವಾದ ಪಡೆದಿದ್ದರು. ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಕಾಪು ಮಾರಿಗುಡಿ ದೇವಾಲಯಕ್ಕೂ ಸಿಂಪಲ್ ಸ್ಟಾರ್ ಭೇಟಿ ನೀಡಿದ್ದರು. ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನವನ್ನೂ ಪಡೆದಿದ್ದರು. ಪುಂಗನೂರು ತಳಿಯ ಗೋವುಗಳನ್ನು ಮುದ್ದಾಡಿ ತಮ್ಮ ಗೋ ಪ್ರೇಮವನ್ನ ಮೆರೆದಿದ್ದರು ರಕ್ಷಿತ್ ಶೆಟ್ಟಿ. ಇದೀಗ ಅಯೋಧ್ಯೆಗೆ ತೆರಳಿ ಬಾಲ ರಾಮನ ದರ್ಶನ ಪಡೆದಿದ್ಧಾರೆ. ರಿಚರ್ಡ್ ಆಂಟೋನಿಗೆ ಶುಭವಾಗಲಿ ಎನ್ನುತ್ತಿದ್ದಾರೆ ರಕ್ಷಿತ್ ಫ್ಯಾನ್ಸ್.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!