ಆರ್​ಸಿಬಿ ಹೆಸರು ಬದಲಾವಣೆ.!! ಸುಳಿವು ಕೊಟ್ಟ ರಿಷಬ್ ಶೆಟ್ಟಿ
"ಕಾಂತಾರ ಶಿವ" ಹೇಳಿದ್ದು ಅರ್ಥವಾಯ್ತಾ.?
ಹಿಂಟ್ ಕೊಟ್ಟ ರಿಷಬ್ ಶೆಟ್ಟಿ - ಆರ್​ಸಿಬಿ ಹೆಸರು ಬದಲಾವಣೆ

ಐಪಿಎಲ್​ 17ನೇ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್​ 22ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಮುಖಾಮುಖಿಯಾಗಿದೆ. ಈ ಪಂದ್ಯ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಆರ್​ಸಿಬಿ ಅಭಮಾನಿಗಳಿಗಾಗಿ ಮಾರ್ಚ್​ 19ರಂದು ‘ಆರ್​ಸಿಬಿ ಅನ್​ಬಾಕ್ಸ್' ಎಂಬ ಕಾರ್ಯಕ್ರಮ ನಡೆಸಲಿದೆ. ಈ ಸಮಾರಂಭದ ಪ್ರೋಮೊವೊಂದು ಬಿಡುಗಡೆಯಾಗಿದ್ದು, ಕಂಬಳದ ಕೋಣಗಳೊಂದಿಗೆ ನಟ ರಿಷಬ್​ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಅವರು ಹೇಳಿದ ಡೈಲಾಗ್​ ಒಂದು ಆರ್​ಸಿಬಿಯ ಹೆಸರು ಬದಲಾವಣೆಯಾಗುವ ಸುಳಿವೊಂದನ್ನು ನೀಡಿದಂತಿದೆ.

ಆರ್​ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್​ಸಿಬಿ ಅನ್​ಬಾಕ್ಸ್​ ಹೆಸರಿನಲ್ಲಿ ನಡೆಯುತ್ತ ಬಂದಿರುವ ಕಾರ್ಯಕ್ರಮ ಈ ಬಾರಿ ಮಾರ್ಚ್​ 19ರಂದು ನಿಗದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಆರ್​ಸಿಬಿ ಅನ್​ಬಾಕ್ಸ್​ನಲ್ಲಿ ತಂಡದ ಹೊಸ ಜೆರ್ಸಿಯನ್ನೂ ಅನಾವರಣಗೊಳಿಸಲಾಗುವುದು. ಜತೆಗೆ ಅಭಿಮಾನಿಗಳ ಎದುರು ಹಲವು ಅಚ್ಚರಿಯ ಮತ್ತು ವಿಶೇಷ ಘೋಷಣೆಗಳನ್ನು ಮಾಡಲಾಗುವುದು ಎಂದು ಆರ್​ಸಿಬಿ ತಂಡ ಈಗಾಗಲೇ ತಿಳಿಸಿದೆ. ಈ ಬಾರಿಯ ಅಚ್ಚರಿ ಏನೆಂಬುದನ್ನು ಆರ್​ಸಿಬಿ ಅಭಿಮಾನಿಗಳು ಕಾದು ಕುಳಿತಿದ್ದರು. ಇದರ ಬೆನ್ನಲೇ ಆರ್​ಸಿಬಿ ಬಿಡುಗಡೆ ಮಾಡಿದ ಪೋಮೊವೊಂದು ಇದೀಗ ಅಭಿಮಾನಿಗಳಲ್ಲಿ ಇನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ.

ಕಾಂತಾರ ಸಿನೆಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರು ಈ ಪ್ರೋಮೊದಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಕಂಬಳದ ಕೋಣಗಳ ಮೇಲೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಎಂದು ಬರೆದಿರುತ್ತದೆ. ಈ ವೇಳೆ ರಿಷಬ್ ಶೆಟ್ಟಿ ಬೆಂಗಳೂರು ಹೆಸರಿನ ಕೋಣವನ್ನು ಇದು ಬೇಡ ಭಟ್ರೆ.. ತೆಗೆದುಕೊಂಡು ಹೋಗಿ ಇದನ್ನು ಎಂದು ಹೇಳಿ ಅರ್ಥ ಆಯ್ತಾ ಎಂದು ಹೇಳುತ್ತಾರೆ. ಅವರ ಈ ಹೇಳಿಕೆ ನೋಡುವಾಗ ರಾಯಲ್​ ಚಾಲೆಂಜರ್ಸ್ ಮುಂದೆ ಬೆಂಗಳೂರು ಎನ್ನುವ ಹೆಸರು ಬದಲಾಗುವ ಸಾಧ್ಯತೆಯೊಂದು ಕಂಡುಬಂದಿದೆ. ಏನೇ ಬದಲಾವಣೆ ಇದ್ದರೂ ಕೂಡ ಮಾರ್ಚ್ 19ರ ತನಕ ಕಾಯಲೇ ಬೇಕು. 

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!