ಮಂಗಳೂರು : ಬೈಕ್ ಡಿಕ್ಕಿಯಾಗಿ ಪಾದಚಾರಿ ಬೇಕರಿ ಮಾಲೀಕ ಸಾವು.!
ಅಪಘಾತ - ಪಾದಚಾರಿ ಸಾವು

ಉಳ್ಳಾಲ : ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. 

ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ, ಬೇಕರಿ ಮಾಲಕ ರಾಜೇಶ್ ಶೆಟ್ಟಿ(49)ಮೃತಪಟ್ಟವರು.

ರಾಜೇಶ್ ಶೆಟ್ಟಿಯವರ ಬೇಕರಿ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿಯಿದೆ. ಬೇಕರಿ ಮುಂಭಾಗದ ಹೆದ್ದಾರಿ ಬದಿಯಲ್ಲೇ ಅವರ ಮನೆಯಿದೆ. ಭಾನುವಾರ ತಲಪಾಡಿ ದೇವಿಪುರದ ರಥೋತ್ಸವವಿದ್ದ ಹಿನ್ನಲೆಯಲ್ಲಿ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ ಮಧ್ಯಾಹ್ನ ಬೇಕರಿಗೆ ತೆರಳಲು ಹೆದ್ದಾರಿ ದಾಟಲು ನಿಂತಿದ್ದರು.

ಈ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಮಂಗಳೂರು ದಕ್ಷಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಬೈಕ್‌ ಸವಾರ ಮಹಮ್ಮದ್ ಸೊಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ಶೆಟ್ಟಿಯವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!