ಪಡುಬಿದ್ರಿಯಲ್ಲಿ ಆತಂಕ ಸೃಷ್ಟಿಸಿದ ಬೆಂಕಿ ಅನಾಹುತ.!!
ಆಕಸ್ಮಿಕ ಬೆಂಕಿ - ತಪ್ಪಿದ ಅನಾಹುತ

ವರದಿ: ಸುರೇಶ್ ಎರ್ಮಾಳ್

ಪಡುಬಿದ್ರಿಯ ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ.

ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. 

ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು , ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬಾವಿಯಿಂದ ನೀರು ಸೇದಿ ಬೆಂಕಿಯನ್ನು ನಿಯಂತ್ರಿಸಿದ್ದು, ಉಡುಪಿಯಿಂದ  ಅಗ್ನಿ ಶಾಮಕ ದಳದ ವಾಹನ ಬರುವ ಹೊತ್ತಿಗೆ ಬಹುತೇಕ ಬೆಂಕಿ ನಿಯಂತ್ರಣದಲ್ಲಿದ್ದು, ಅವರು ಬಂದು ಬೆಂಕಿಯನ್ನು ಸಂಪೂರ್ಣ ನಂದಿಸುವ ಮೂಲಕ ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಡುವಂತ್ತಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!