ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿ
ಮಂಡ್ಯದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೂರಿಸ್ಟ್ ಬಸ್
ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರು

ಕಾರ್ಕಳ: ಟೂರಿಸ್ಟ್ ಬಸ್ ಪಲ್ಟಿಯಾಗಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಮಂಡ್ಯದಿಂದ ಉಡುಪಿ ಕಡೆಗೆ ಸಾಗುತ್ತಿದ್ದ KA51C7246 ನೋಂದಾಯಿತ ಟೂರಿಸ್ಟ್ ಬಸ್ ಕುಕ್ಕುಂದೂರು ಮಸೀದಿ ಬಳಿ ಪಲ್ಟಿಯಾಗಿದೆ.

ಪರಿಣಾಮವಾಗಿ ಬಸ್‌ನೊಳಗಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ದ್ವಿಚಕ್ರ ವಾಹನವೊಂದು ಅಡ್ಡಬಂದ ಕಾರಣದಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!