ದಾರುಣ ಘಟನೆ: ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು.!
ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ

]ನವವಿವಾಹಿತೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಒಂದೇ ಮರಕ್ಕೆ ನೇಣು ಹಾಕಿಕೊಂಡು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ (28), ಲಲಿತಾ ಹಲಗೇರಿ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಒಂದೇ ಊರಿನವರಾದ ಅಪ್ಪಣ್ಣ ಗೊರಕಿ ಹಾಗೂ ಲಲಿತಾ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಕೊನೆಗೆ ಪೋಷಕರ ಒತ್ತಾಯಕ್ಕೆ ಮಣಿದು ಲಲಿತಾ ಹಲಗೇರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಗಾಣಾಪುರ ಗ್ರಾಮದ ಯುವಕನೊಂದಿಗೆ ಏ. 4ರಂದು ವಿವಾಹವಾಗಿದ್ದಳು.

ಇದರಿಂದ ಅಪ್ಪಣ್ಣ-ಲಲಿತಾ ಇಬ್ಬರು ಮನ ನೊಂದಿದ್ದರು. ನೇಣಿಗೆ ಶರಣಾಗುವ ಮುನ್ನ ಇಬ್ಬರು ಒಂದೇ ಬಣ್ಣದ ಹಾಗೂ ಐ ಲವ್‌ ಯು ಎಂದು ಬರೆದಿರುವ ಒಂದೇ ತೆರನಾದ ಟೀ ಶರ್ಟ್‌ ಧರಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಜಾನೆ ಗ್ರಾಮದ ಜನರು ಗದ್ದೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!