ಪ್ರಚಂಡ ಕುಳ್ಳ ದ್ವಾರಕೀಶ್‌ ಇನ್ನಿಲ್ಲ - ಹೃದಯಾಘಾತಕ್ಕೆ ಬಲಿ.!
ನಟ ನಿರ್ಮಾಪಕ ದ್ವಾರಕೀಶ್‌ ಇನ್ನಿಲ್ಲ

ಸ್ಯಾಂಡಲ್‌ವುಡ್‌‌ ಪ್ರಚಂಡ ಕುಳ್ಳ ದ್ವಾರಕೀಶ್‌ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದ ಲೆಜೆಂಡ್ ನಟ  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್‌ ಕನ್ನಡ ಚಿತ್ರರಂಗವನ್ನು ಬಿಟ್ಟು ಹೋಗಿದ್ದಾರೆ. 

ಹೃದಯಾಘಾತದಿಂದ ದ್ವಾರಕೀಶ್‌ ಅಸುನೀಗಿದ್ದಾರೆ ಅಂತ ಹೇಳಲಾಗ್ತಿದೆ.  ಕನ್ನಡ ಹಾಗೂ ತಮಿಳು ಚಿತ್ರಗಳಿಗೆ ಬಂಡವಾಳ ಹೂಡಿದ್ದಾರೆ ಕರ್ನಾಟಕದ ಕುಳ್ಳ ದ್ವಾರಕೀಶ್‌. ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ದ್ವಾರಕೀಶ್‌ನ ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಮೊನ್ನೆಯಷ್ಟೇ ಮತ್ತೊಬ್ಬ ನಿರ್ಮಾಪಕ ಸೌಂದರ್ಯ ಜಗದೀಶ್‌ ಸೂಸೈಡ್ ಮಾಡಿಕೊಂಡಿದ್ದರು.

1963ರಲ್ಲಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್‌ ಪಾದಾರ್ಪಣೆ ಮಾಡಿದರು. ಹಲವಾರು ಸೂಪರ್‌ ಹಿಟ್‌ ಸಿನಿಮಾಗಳಿಗೆ ಬಂಡವಾಳ ಹಾಕುವುದರ ಜೊತೆಗೆ ನಟಿಸಿ ಸೈ ಎನಿಸಿಕೊಂಡಿದ್ದರು. ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ. ಇನ್ನೂ ದ್ವಾರಕೀಶ್‌ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ  ಮಿಡಿದಿದ್ದಾರೆ. 1966ರಲ್ಲಿ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ದೇಶನ ಕೂಡ ಮಾಡಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!