"ಅರ್ಜಿ ಹಾಕಿ ಯಾರು ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ"; ಶಾಸಕ ಗುರ್ಮೆ ಸುರೇಶ್ ಶೆಟ್ಟಿ
"ಅರ್ಜಿ ಹಾಕಿ ಯಾರು ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ"; ಶಾಸಕ ಗುರ್ಮೆ ಸುರೇಶ್ ಶೆಟ್ಟಿ


ವರದಿ: ಸುರೇಶ್ ಎರ್ಮಾಳ್

ಕಾಪು : ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಬಾವಣೆಯಿಂದ ಹೊರ ಬರ ಬೇಕಾಗಿದೆ, ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸ ಬಹುದೇ ಬಹುದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ ಜನರ ಸೇವೆ ಮಾಡಲು ಅವಕಾಶವೇ ಸಿಗುತ್ತಿರಲಿಲ್ಲ,  ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ ಎಂದರು.

ಏ.21ಕ್ಕೆ  ಬಿಜೆಪಿ ಮುಖಂಡ ಪ್ರತಾಪ ಸಿಂಹ  ಕಾಪುವಿಗೆ ಆಗಮಿಸಲಿದ್ದು ಅದೇ ದಿನ ಸಂಜೆ ಕಾಪು ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯವರಗೆ ರೀಡ್ ಶೋ.. ನಡೆಯಲಿದೆ ಎಂದರು.

ಇದೇ ಸಂದರ್ಭ  ಕಾಂಗ್ರೆಸ್ ಕಾರ್ಯಕರ್ತ ದಿನಕರ್ ಪಾಂಗಾಳ ಇವರನ್ನು ಶಾಸಕರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸೇರಿಸಿಕೊಂಡರು. ಸುದ್ಧಿಗೋಷ್ಠಿಯಲ್ಲಿ ಜೀತೇಂದ್ರ ಶೆಟ್ಟಿ ಉದ್ಯಾವರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮುರಳಿಧರ ಪೈ, ಕೃಷ್ಣ ರಾವ್, ಸೋನು ಪಾಂಗಾಳ ಇದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!