ಬಂಟ್ವಾಳ: ಬಾವಿಯೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ ಕಾರ್ಮಿಕರು.!
ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ.

ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ ಆಕ್ಸಿಜನ್ ಕೊರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದಿರುವ ಹಿನ್ನೆಲೆ ಇನ್ನೊಬ್ಬ ಇಳಿದಿದ್ದು, ಈ ವೇಳೆ ಆತನೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾನೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!