ಕಡಬ: ಒಣಗಲು ಹಾಕಿದ್ದ ಅಡಿಕೆ ರಾಶಿ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತ್ಯು
ಕಡಬ: ಒಣಗಲು ಹಾಕಿದ್ದ ಅಡಿಕೆ ರಾಶಿ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತ್ಯು

ಕಡಬ: ಸಿಡಿಲು ಬಡಿದು ನವ ವಿವಾಹಿತ ಸಾವನ್ನಪ್ಪಿದ ಘಟನೆ ಕಡಬದ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್‌ (34) ಮೃತ ದುರ್ದೈವಿ. 

ಶುಕ್ರವಾರ ಸಂಜೆ ವೇಳೆಗೆ ಸುಬ್ರಹ್ಮಣ್ಯ ಭಾಗದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿತ್ತು. ಈ ಸಂದರ್ಭ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಸೋಮಸುಂದರ್‌ ಅವರು ರಾಶಿ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. 

ಸೋಮಸುಂದರ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅದಾಗಲೇ ಅವರು ಮೃತಪಟ್ಟಿದ್ದರು. ಇನ್ನು ಸೋಮಸುಂದರ್‌ ಅವರು ಸುಬ್ರಹ್ಮಣ್ಯ ಸಮೀಪ ಕಾರ್‌ ವಾಷಿಂಗ್‌ ಉದ್ಯಮ ನಡೆಸಿಕೊಂಡಿದ್ದರು. 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!