ಉಪ್ಪಿನಂಗಡಿ: ಹೃದಯಾಘಾತಕ್ಕೆ ಯುವಕ ಬಲಿ
ಉಪ್ಪಿನಂಗಡಿ: ಮಲಗಿದ್ದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಮೇ 3ರಂದು ನಿಧನರಾಗಿದ್ದಾರೆ.
ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಅವರು ಕೆಲಸಕ್ಕೆ ರಜೆ ಇದ್ದುದ್ದರಿಂದ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಇವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದು ಬಂದಿದೆ.
Comments
0 comment