ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಕ್ಕೆ ಸಜ್ಜಾಗಿದ್ದ 14 ಮಂದಿ ಗಾಯಗೊಂಡಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಹೊಗೆ
14 ಪ್ರಯಾಣಿಕರಿಗೆ ಗಾಯ
ಮಂಗಳೂರು: ಮಸ್ಕತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನದಲ್ಲಿ ಎಕ್ಸ್ಪ್ರೆಸ್ ವಿಮಾನದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಕ್ಕೆ ಸಜ್ಜಾಗಿದ್ದ 14 ಮಂದಿ ಗಾಯಗೊಂಡಿದ್ದಾರೆ.
ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಕೆಳಕ್ಕೆ ಇಳಿಸಲಾಗಿದೆ. ಕೆಳಗಿಳಿಯುವ ಧಾವಂತದಲ್ಲಿ ಕೆಲವರಿಗೆ ಬಿದ್ದು ಗಾಯವಾಗಿದೆ ಎಂದು ಮಾಹಿತಿ ಲಭಿಸಿದೆ. ವಿಮಾನದಲ್ಲಿ 141 ಪ್ರಯಾಣಿಕರು, ಆರು ಸಿಬ್ಬಂದಿ ಇದ್ದರು ಎನ್ನಲಾಗಿದೆ. ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
Comments
0 comment