ಪುತ್ತೂರು: ಹಿಂದೂ ಮಹಿಳೆ ಮೇಲೆ ಮುಸ್ಲಿಂ ಯುವಕನಿಂದ ಕಿರುಕುಳ ಆರೋಪಿಯ ಬಂಧನ.
ಅಂಗಡಿಯೊಂದರಲ್ಲಿ ದಿನಸಿ ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭದಲ್ಲಿ ಅಲ್ಲಿದ್ದ ಅನ್ಯ ಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡುತ್ತಿರುವುದು ತಿಳಿದು ಬಂದಿದೆ.
ಘಟನೆಯನ್ನು ವಿರೋಧಿಸಿ ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದೂ ಯುವಕರು ಜಮಾಯಿಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಸರ್ವೆ ನೇರೋಳ್ತಡ್ಕದ ಮಹಿಳೆಯೋರ್ವರು ಸೆ.14ರಂದು ಸಂಜೆ ಅಂಗಡಿಗೆ ತಿಂಗಳಾಡಿಯಲ್ಲಿರುವ ಸುಪರ್ ಬಜಾರ್ ನಲ್ಲಿ ದಿನಸಿ ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹಮೀದ್ ಪಟ್ಟೆ ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು ಎಂಬಾತ ಮಹಿಳೆಯ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಈ ವೇಳೆ ಮಹಿಳೆ ಬೊಬ್ಬೆ ಹೊಡೆದ ಪರಿಣಾಮ ಅಲ್ಲಿ ಜನ ಸೇರಿದ್ದರಿಂದ ಆರೋಪಿ ಬದ್ರುದ್ದೀನ್ ಯಾನೆ ಬದ್ರು ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸುದ್ದಿಯಾಗುತ್ತಲೇ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಹಿಂದೂ ಯುವಕರು ಸ್ಥಳದಲ್ಲಿ ಜಮಾಯಿಸಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು, ನೆರೆದವರು ಪೊಲೀಸರನ್ನು ಆಗ್ರಹಿಸಿದ್ದು ಸೆ.15ರ ಬೆಳಿಗ್ಗೆ 8 ಗಂಟೆಯೊಳಗೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ಉಗ್ರ ರೀತಿಯ ಹೋರಾಟ ನಡೆಸುವುದಾಗಿ ಹಿಂದು ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ಇಂದು ಮುಂಜಾನೆ ಆರೋಪಿಯನ್ನು ಬಂಧಿಸಲಾಗಿದೆ.
Comments
0 comment