ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆಗೆ ಯತ್ನ...
ಮಂಗಳೂರು

ನಗರದ ಮಂಗಳಾದೇವಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಗಣೇಶ್ ಮತ್ತು ಪ್ರೀತಿ ಹಾಗೂ ಸೌರಭ್, ಪ್ರತೀಕ್ ಎಂಬವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನಾಲ್ಕು ಮಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

ಕೃತ್ಯಕ್ಕೆ ಕಾರಣ ಏನು ಎಂದು ತಿಳಿದಿಲ್ಲ. ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!