ಗೋವಿಗಾಗಿ ಮೇವು ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ...
ವಿಶ್ವ ಹಿಂದೂ ಪರಿಷತ್ ಮಂಗಳೂರು ಸೇವಾ ಪ್ರಕಲ್ಪದ ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ಇದರ ವತಿಯಿಂದ ದಿನಾಂಕ 6-11-2022ನೇ ಆದಿತ್ಯವಾರದಂದು ನಡೆಯಲಿರುವ ಗೋವಿಗಾಗಿ ಮೇವು ಹೊರೆಕಾಣಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಾಳೆ ದಿನಾಂಕ 27-10-2022 ನೇ ಗುರುವಾರ ಬೆಳಿಗ್ಗೆ 11:00 ಗಂಟೆಗೆ ಮಂಗಳೂರಿನ ಪುಣ್ಯ ಕ್ಷೇತ್ರದಲ್ಲಿ ಒಂದಾದ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
ಈ ಪತ್ರಿಕಾಗೋಷ್ಠಿಯಲ್ಲಿ ಭಾ ಜ ಪಾ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಶ್ರೀ ವೇದವ್ಯಾಸ ಕಾಮತ್ ಮತ್ತು ಶ್ರೀ ಡಾ. ವೈ ಭರತ್ ಶೆಟ್ಟಿ ಭಾಗವಹಿಸಲಿದ್ದಾರೆ.
ಗೋ ಮಾತೆಯ ಒಡಲು ತುಂಬಿಸುವ ಈ ಪುಣ್ಯ ಕಾರ್ಯದಲ್ಲಿ ಅತೀ ಎಚ್ಚು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಬೇಕಾಗಿ ಮಂಗಳೂರು ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ವಿನಂತಿಸಿದ್ದಾರೆ.
Comments
0 comment