ಮಂಗಳೂರು: ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಪಿಲಾರ್ ನ ಪಂಜಂದಾಯ ದೇವಸ್ಥಾನದ ಸಮೀಪ ನಡೆದಿದೆ.55 ವರ್ಷದ ಶಿವಾನಂದ ತನ್ನ ಹೆಂಡತಿ ಶೋಭರನ್ನು ಹತ್ಯೆ ಮಾಡಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನುಮಾನ ಸ್ವಭಾವದ ಶಿವಾನಂದ ತನ್ನ ಹೆಂಡತಿ ಶೋಭರ ಜತೆ ಯಾವಾಗಲೂ ಸಣ್ಣ ಪುಟ್ಟ ವಿಷಯಕ್ಕೂ ಜಗಳವಾಡುತ್ತಿದ್ದರು. ನಿನಗೆ ಅನೈತಿಕ ಸಂಬಂದ ಇದೆ ಎಂದು ಸಂಶಯ ಮಾಡಿ ಕಂಡಕಂಡವರಿಗೆ ಕಟ್ಟುವ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇಂದು ಕೂಡ ತಾಯಿ ಜೊತೆಗೆ ಜಗಳವಾಡಿದ್ದರು ಎಂದು ಮಗ ಕಾರ್ತಿಕ್ ತಿಳಿಸಿದ್ದು, ಮಗ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.ಈ ಬಗ್ಗೆ ಪ್ರತ್ಯೇಕವಾಗಿ ದೂರು ಪಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.ಮೃತ ದಂಪತಿಗೆ ಕಾರ್ತಿಕ್ ಎಂಬ ಮಗ ಮತ್ತು ಓರ್ವ ಪುತ್ರಿ ಇದ್ದಾರೆ. ಮಗ ತಂದೆ-ತಾಯಿ ಜೊತೆಗೆ ವಾಸವಿದ್ದು, ಮಗಳನ್ನು ಪೆರ್ಮುದೆಯ ಸಂದೀಪ್ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.
Comments
0 comment