ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅನಿರ್ದಿಷ್ಟಾವಧಿ ಧರಣಿ ಆರಂಭ...
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅನಿರ್ದಿಷ್ಟಾವಧಿ ಧರಣಿ ಆರಂಭ...

ಸುರತ್ಕಲ್: ಇಲ್ಲಿನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ.

ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಧರಣಿ ಕೂತಿದ್ದಾರೆ.ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಇದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ ಅವರನ್ನು ನಂಬುವ ಹಾಗಿಲ್ಲ.

ಪ್ರತಿಭಟನೆ ಎದುರಿಸಲು ಜಿಲ್ಲಾಡಳಿತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಆದರೆ ಇದರಿಂದ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಲ್ಲಿಂದ ಟೋಲ್ ಗೇಟ್ ತೆರವುಗೊಳ್ಳುವ ತನಕ ಹಗಲು ರಾತ್ರಿ ಹೋರಾಟ ಮುಂದುವರಿಯಲಿದೆ” ಎಂದರು.ಡಿವೈ ಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್, ರಾಘವೇಂದ್ರ ರಾವ್, ಎಂ. ಜಿ ಹೆಗಡೆ ಮತ್ತಿತರರು ಧರಣಿ ಕೂತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!