ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ಎಂಬಲ್ಲಿ ನ.2ರ ಬುಧವಾರದಂದು ನಡೆದಿದೆ.
ಬಿರ್ಮನೊಟ್ಟು ಮನೆ ನಿವಾಸಿ ವಸಂತಗೌಡ ಎಂಬವರ ಪುತ್ರ ದಿನೇಶ್ ಗೌಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ದಿನೇಶ್ ಗೌಡ ಅವರು ವಿಪರೀತ ಅಮಲು ಪದಾರ್ಥ ಸೇವನೆ ಮಾಡುವ ಚಟ ಹೊಂದಿದ್ದರು. ಈ ಚಟವನ್ನು ಬಿಡಿಸಲು ಮನೆಯವರು ಪ್ರಯತ್ನಿಸುತ್ತಿದ್ದು, ಇದೇ ಕಾರಣಕ್ಕೆ ದಿನೇಶ್ ಗೌಡ ಅವರು ಮನನೊಂದು ಮನೆ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಬಗ್ಗೆ ಮೃತ ಯುವಕನ ಪೋಷಕರು ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
0 comment