ಬಂಟ್ವಾಳ: ಶಾಲೆಗೆಂದು ತೆರಳಿದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಣೆಯಾದ ಬಾಲಕಿಯನ್ನು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿರುವ ಪೃಥ್ವಿ ಎಂದು ತಿಳಿದುಬಂದಿದೆ.
ಪೃಥ್ವಿಯನ್ನು ವಿದ್ಯಾಭ್ಯಾಸ ದ ಸಲುವಾಗಿ ಪುಟ್ಟರಾಜ್ ಅವರು ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು. ಕಲ್ಲಡ್ಕ ದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಪೃಥ್ವಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು. ಪೃಥ್ವಿ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು ಆದರೆ ಅವಳು ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ.
Comments
0 comment