ಬೆಂಗಳೂರು: ಬುಧವಾರ ರಾತ್ರಿ ಬೆಂಗಳೂರು ನಗರದ ಸುಮನಹಳ್ಳಿ ಡಿಪೋ ಬಳಿ ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟಿರುವ ಯುವಕ ಪ್ರಮೋದ್ ಎಂದು ತಿಳಿದು ಬಂದಿದೆ.. ಸುಮನಹಳ್ಳಿ-ಲಗ್ಗೆರೆ ರಿಂಗ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ಸವಾರ ಪ್ರಮೋದ್ ಸುಮನಹಳ್ಳಿಯಿಂದ ಲಗ್ಗೆರೆ ರಸ್ತೆ ಮಾರ್ಗವಾಗಿ ಆಗಮಿಸುತ್ತಿದ್ದಾಗ ರಸ್ತೆ ಉಬ್ಬು ಇದ್ದ ಕಾರಣ ನಿಧಾನವಾಗಿ ಸಾಗಿದ್ದಾರೆನ್ನಲಾಗಿದೆ.ಈ ವೇಳೆ ಬಿಎಂಟಿಸಿ ಬಸ್ ಹಿಂಬದಿಯಿಂದ ಬಂದು ಬೈಕ್ಗೆ ಢಿಕ್ಕಿ ಹೊಡೆದು ಸವಾರನ ಮೇಲೆ ಸಂಚರಿಸಿದೆ ಎಂದು ಹೇಳಲಾಗಿದೆ.
ಬೈಕ್ ಸವಾರನಿಗೆ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
Comments
0 comment