ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿಯಲ್ಲಿರುವ ಭದ್ರಾ ಮೇಲ್ಡಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಕಾರಿನಲ್ಲಿ ಚಂದ್ರಶೇಖರ್ ಅವರ ಶವ ಹಿಂಬದಿ ಸೀಟ್ ನಲ್ಲಿ ಪತ್ತೆಯಾಗಿದೆ.
ಕಳೆದ ಮೂರು ದಿನಗಳಿಂದಲೂ ಚಂದ್ರಶೇಖರ ಗಾಗಿ ಎಲ್ಲೆಡೆ ಹುಡುಕಾಟವನ್ನು ನಡೆಸಲಾಗುತ್ತಿತ್ತು.ಆದರೆ ಭದ್ರಾ ಮೇಲ್ದಂಡೆ ಕಾಲುವೆಯ ಬಳಿಯಲ್ಲಿ ಕಾರಿನ ಕೆಲವು ಬಿಡಿಭಾಗಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂಧಿಗಳು ಕಾಲುವೆಯಲ್ಲಿ ಶೋಧ ಕಾರ್ಯವನ್ನು ನಡೆಸಿದ್ದಾರೆ. ಈ ವೇಳೆಯಲ್ಲಿ ಕಾಲುವೆಯಲ್ಲಿ ಕಾರು ಪತ್ತೆಯಾಗಿತ್ತು. ಕಾರಿನ ಹಿಂಬದಿಯ ಸೀಟ್ ನಲ್ಲಿ ಚಂದ್ರಶೇಖರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ವಿನಯ್ ಗುರೂಜಿ ಅವರ ಆಶ್ರಮಕ್ಕೆ ಭೇಟಿ ನೀಡಿ ವಾಪಸ್ ಹೊನ್ನಾಳಿಗೆ ಬಂದ ನಂತರ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಚಂದ್ರಶೇಖರ್ ತನ್ನ ಸ್ನೇಹಿತ ಕಿರಣ್ ನನ್ನು ಡ್ರಾಪ್ ಮಾಡಿ ಹೊನ್ನಾಳಿಗೆ ತೆರಳಿದ್ದರು. ಹೊನ್ನಾಳಿಗೆ ತೆರಳಿದ ನಂತರದಲ್ಲಿಯೂ ಇಬ್ಬರು ಸ್ನೇಹಿತರ ಜೊತೆಗೆ ಮಾತನಾಡಿದ್ದರು. ಆದರೆ ತದನಂತದಲ್ಲಿ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಹುಡುಕಾಟವನ್ನು ನಡೆಸಿದ ನಂತರದಲ್ಲಿ ಕಾಲುವೆಯಲ್ಲಿ ಕಾರು ಪತ್ತೆಯಾಗಿದೆ. ಸಹೋದರನ ಮಗನ ಶವವನ್ನು ಕಂಡ ಶಾಸಕ ರೇಣುಕಾಚಾರ್ಯ ಕಣ್ಣೀರು ಸುರಿಸಿದ್ದಾರೆ. ಇನ್ನು ಚಂದ್ರಶೇಖರ ಶವ ಪತ್ತೆಯಾದ ಬೆನ್ನಲ್ಲೇ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಕಾರಿನ ಹಿಂಬದಿಯ ಶೀಟ್ನಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿಇದು ಅಪಘಾತವೋ ಇಲ್ಲಾ, ಕೊಲೆಯೋ ಎನ್ನುವ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾಕ್ಷಾಧಾರಗಳನ್ನು ಕಲೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ.
Comments
0 comment