ಪುತ್ತೂರಿನ ಪಟಾಕಿ ಗೊಡೌನ್ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಭಂದಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನ್ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ್ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಸೆಕ್ಷನ್ 9B ಅಡಿ ಸೊಮೋಟೋ ಪ್ರಕರಣ ದಾಖಲಿಸಿದ್ದಾರೆ...
ಸೆಕ್ಷನ್ 9B ಅಡಿ ಕರುಣಾಕರ್ ರೈ ವಿರುದ್ಧ ಸ್ಫೋಟಕ ದಾಸ್ತಾನು ಗಂಭೀರ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಪೊಲೀಸರು ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ...
ಪುತ್ತೂರು ದರ್ಬೆಯ ಅಶ್ವಿನ್ ಹೋಟೆಲ್ ಮಾಲಕರಾದ ಕರುಣಾಕರ್ ರೈ ಮಾಲಿಕತ್ವದ ದರ್ಬೆಯ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹದಿಯಲ್ಲಿದ್ದ ಪಟಾಕಿ ಗೋಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ 6 ಗಂಟೆ ಸಮಯಕ್ಕೆ ಪಟಾಕಿ ಸ್ಪೋಟಿಸಿದ್ದು, ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿ ಬಿದ್ದಿದ್ದಾರು...
ಆ ಕಟ್ಟಡದಲ್ಲಿರುವ ಎಲ್ಲಾ ಅಂಗಡಿಯವರು ಬಂದ್ ಮಾಡಿ ಹೊರ ಓಡಿದ್ದಾರೆ... ದರ್ಬೆಯಲ್ಲಿ ಪಟಾಕಿ ಮಾರುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ... ಆದರೆ ಕರುಣಾಕರ್ ರೈ ತನ್ನ ಮನೆಯ ಉಪಯೋಗಕ್ಕೆ ಇಟ್ಟ ಪಟಾಕಿ ಎಂದು ಪತ್ರಿಕೆಗೆ ಹೇಳಿಕೆ ನೀಡಿದ್ದರು...
ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಘಟನೆ ನಡೆದಿದೆಯೋ ಅಥವಾ ಬೆಂಕಿ ಆಕಸ್ಮಿಕ ನಡೆದಿದೆಯೋ ಎನ್ನುವ ಬಗ್ಗೆ ತನಿಖೆಯಿಂದ ತಿಳಿದು ಬರಬೇಕಿದೆ... ಆದರೆ, ಅಷ್ಟೊಂದು ಪ್ರಮಾಣದ ಪಟಾಕಿ ಸಂಪೂರ್ಣ ಸಿಡಿದಿದ್ದೆ ಆದಲ್ಲಿ ಅದೆಷ್ಟೋ ಅಮಾಯಕರ ಜೀವಕ್ಕೆ ಕುತ್ತಾಗಿರುತ್ತಿತ್ತು... ಈ ಬಗ್ಗೆ ನಿಖರವಾಗಿ ತನಿಖೆ ಕೈಗೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ... ಮಾಧ್ಯಮ ವರದಿ ಆಧರಿಸಿ ರಾಜ್ಯ ಪೊಲೀಸ್ ಇಲಾಖೆ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ಪೊಲೀಸರಿಗೆ ಸೂಚನೆ ನೀಡಿದ್ದಾರೆ... ಪುತ್ತೂರು ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದ ನಂತರ ಅಲ್ಲಿದ್ದ ಪಟಾಕಿಯನ್ನು ಪಿಕಪ್ ನಲ್ಲಿ ಬೇರೆ ಕಡೆ ಸಾಗಿಸಲಾಗಿದೆ ಎನ್ನಲಾಗಿದೆ...
Comments
0 comment