ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅರೆಸ್ಟ್
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ರಾಜ್ಯದ ಹಲವು ಕಡೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ದಾಳಿ ಮಾಡಿದ್ದು ಮೂವರನ್ನು ಬಂಧಿಸಿದೆ.

ಇಂದು ಬೆಳಗ್ಗೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮನೆಗೆ ದಾಳಿ ನಡೆಸಿದ ಎನ್ಐಎ ತಂಡ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಹಾಗೂ ಇಕ್ಬಾಲ್ ಬೆಳ್ಳಾರೆ ಎಂಬಿಬ್ಬರನ್ನು ಅರೆಸ್ಟ್ ಮಾಡಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಎಂದು ತಿಳಿದುಬಂದಿದೆ. ಇವರ ಜೊತೆಗೆ ಇಬ್ರಾಹಿಂ ಶಾ ಎಂಬಾತನನ್ನೂ ಬಂಧಿಸಲಾಗಿದೆ.

ಹುಬ್ಬಳ್ಳಿ, ಮೈಸೂರಿನಲ್ಲೂ ಕೆಲವು ಕಡೆ ಎನ್ಐಎ ದಾಳಿ ಮಾಡಿದ್ದು, ಹಳೇ ಹುಬ್ಬಳ್ಳಿಯ ಎಸ್ಡಿಪಿಐ ಮುಖಂಡ ನೂರಾನುಲ್ಲ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದೆ ಎನ್ನಲಾಗಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!