ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ
ಉಡುಪಿ: ವಿಳಾಸ ಕೇಳುವ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ.
ಹೊಸಕಾಡು ನಿವಾಸಿ ರೇಖಾ (40) ಅವರ 32 ಗ್ರಾಂ ಕರಿಮಣಿ ಸರವನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ, ಅಪರಿಚಿತ ಯುವಕರಿಬ್ಬರು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ದನಾಗಿ ಬೈಕ್ ನಲ್ಲಿ ಕುಳಿತಿದ್ದ. ಹಿಂಬದಿ ಸವಾರ ರೇಖಾ ಅವರ ಬಳಿ ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ನೆಪದಲ್ಲಿ ಈ ಕೃತ್ಯವೆಸಗಿದ್ದಾರೆ.
Comments
0 comment