ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದ್ದು ವಿಶ್ವ ಹಿಂದೂ ಪರಿಷತ್ಗೆ ಮೊದಲ ಗೆಲುವು ಲಭಿಸಿದ್ದು, ಇಂದು ವಿಶ್ವ ಹಿಂದೂ ಪರಿಷತ್ ಪತ್ರಿಕಾಗೋಷ್ಠಿ ನಡೆಸಿದೆ.
ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈಗ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ. ಸೀವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ಮುಂದಿನ ವಿಚಾರಣೆ ಜನವರಿ ೮ಕ್ಕೆ ಮುಂದುಡಿದ್ದಾರೆ. ಈ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಳಲಿ ಮಸೀದಿ ಕಮಿಟಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದು ಹಿಂದೂಗಳಿಗೆ ಸಂದ ಜಯ ಎಂದು ವಿ.ಹಿಂ.ಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. ಅಲ್ಲಿ ದೇವಸ್ಥಾನದ ಮಾದರಿ ಇದ್ದ ಕಾರಣಕ್ಕೆ ನವೀಕರಣಕ್ಕೆ ತಡೆ ತಂದಿದ್ದೆವು. 800 ವರ್ಷಗಳ ಹಿಂದಿನ ದೇವಸ್ಥಾನ, ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಕೋರಿದ್ದೆವು. ಮಂಗಳೂರಿನ ಕೋರ್ಟ್ ಇಂದು ತೀರ್ಪು ನೀಡಿದ್ದು, ಮಸೀದಿ ಅರ್ಜಿಯನ್ನು ವಜಾ ಮಾಡಿದೆ. ನಮ್ಮ ಅಹವಾಲನ್ನು ಎತ್ತಿ ಹಿಡಿದಿದೆ ಎಂದರು. ದೇವಸ್ಥಾನ ಅನ್ನುವ ವಾದಕ್ಕೆ ಪುಷ್ಟಿ ಸಿಕ್ಕಿದೆ., ನಮಗೆ ವಿಶ್ವಾಸವಿದೆ ಮುಂದಿನ ದಿನಗಳಲ್ಲಿ ಅಲ್ಲಿ ಭವ್ಯವಾದಂತಹ ಮಂದಿರ ನಿರ್ಮಾಣವಾಗುತ್ತೆ. ಅದೇ ರೀತಿ ನಮ್ಮ ಹೋರಾಟಕ್ಕೆ ಜಯ ಸಿಗುತ್ತದೆ. ಮಳಲಿ ಮಸೀದಿ ವಿಚಾರದಲ್ಲಿ ನಮಗೆ ಆರಂಭಿಕ ಗೆಲುವು ಸಿಕ್ಕಿದೆ ಎಂದರು.
ಈ ಸಂದರ್ಭದಲ್ಲಿ ವಿ.ಹಿಂ.ಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸೇರಿದಂತೆ ವಿ.ಹಿಂ.ಪ ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ, ವಿ.ಹಿಂ.ಪ ವಿಭಾಗ ಸಂಯೋಜಕ ಭುಜಂಗ ಕುಲಾಲ್ ಅದ್ಯಪಾಡಿ ಉಪಸ್ಥಿತರಿದ್ದರು.
Comments
0 comment